ರಾಜ್ಯ

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್‌ ಲವರ್.‌ ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೆ ನಮ್ಮಿಂದು ಐಪಿಎಲ್‌ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಏನು ಅನಾಹುತ ಆಗಿದೆ, ಅದೆಲ್ಲವನ್ನು ತಪ್ಪಿಸಿ ಬೆಂಗಳೂರು ಗೌರವ ಉಳಿಸುವ ಕೆಲಸ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಕ್ರೌಡ್‌ ಮ್ಯಾನೇಜ್ಮೆಂಟ್‌ ಗಮನದಲ್ಲಿಟ್ಟುಕೊಂಡು ಸ್ಟೇಡಿಯಂ ಬಳಸುತ್ತೇವೆ. ಇದಕ್ಕೆ ಪರ್ಯಾಯವಾಗಿ ಬೇರೆ ದೊಡ್ಡ ಸ್ಟೇಡಿಯಂ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಮುಂದಕ್ಕೆ ಯಾವುದೇ ಐಪಿಎಲ್‌ ಬೆಂಗಳೂರಿನಿಂದ ಶಿಫ್ಟ್‌ ಆಗೋದಕ್ಕೆ ಬಿಡಲ್ಲ. ಇಲ್ಲೇ ನಡೆಸುತ್ತೇವೆ. ಇದು ಬೆಂಗಳೂರಿನ ಗೌರವ. ಅದನ್ನು ಕಾಪಾಡಿಕೊಳ್ಳುತ್ತೇವೆ. ಮುಂದಕ್ಕೆ ಏನೇನಿದೆ ಎಲ್ಲದಕ್ಕೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

6 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

7 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

14 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

14 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

19 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

19 hours ago