ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರು, ಕೃಷಿ ಪಂಪ್ ಸೇಟ್ಗಳಿಗೆ ನಿರಂತರವಾಗಿ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿದೆ. ಆದರೆ, ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ನಮ್ಮಲ್ಲಿ ಹೆಚ್ಚು ವಿದ್ಯುತ್ ಇದೆ. ಏಳು ಗಂಟೆ ಬದಲಾಗಿ ಕೃಷಿ ಪಂಪ್ ಸೆಟ್ಗಳಿಗೆ ೧೦ ಗಂಟೆ ಪೂರೈಸಬೇಕು ಎಂದು ಒತ್ತಾಯಿಸಿದರು.
ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಆನೇಕಲ್ ತಾಲ್ಲುಕಿನಲ್ಲಿ ೨೨ ಕೃಷಿ ಫೀಡರ್ಗಳಿವೆ. ಹಗಲಿನ ವೇಳೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ. ಸರ್ಜಾಪುರ ಮತ್ತು ಅತ್ತಿಬೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದಾಗಿ ಒಂದಿಷ್ಟು ವ್ಯತ್ಯಯವಾಗಿದೆ. ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಲು ೨೦ ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.
ಕುಸುಮ್-ಸಿ ಯೋಜನೆಯಡಿ ೨,೫೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ, ಅಲ್ಲಿಯೇ ಪೂರೈಸಲಾಗುತ್ತದೆ. ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಸುವುದಾಗಿ ಸಚಿವರು ತಿಳಿಸಿದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…