ರಾಜ್ಯ

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರು, ಕೃಷಿ ಪಂಪ್ ಸೇಟ್‌ಗಳಿಗೆ ನಿರಂತರವಾಗಿ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿದೆ. ಆದರೆ, ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ನಮ್ಮಲ್ಲಿ ಹೆಚ್ಚು ವಿದ್ಯುತ್ ಇದೆ. ಏಳು ಗಂಟೆ ಬದಲಾಗಿ ಕೃಷಿ ಪಂಪ್ ಸೆಟ್‌ಗಳಿಗೆ ೧೦ ಗಂಟೆ ಪೂರೈಸಬೇಕು ಎಂದು ಒತ್ತಾಯಿಸಿದರು.

ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಆನೇಕಲ್ ತಾಲ್ಲುಕಿನಲ್ಲಿ ೨೨ ಕೃಷಿ ಫೀಡರ್‌ಗಳಿವೆ. ಹಗಲಿನ ವೇಳೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ. ಸರ್ಜಾಪುರ ಮತ್ತು ಅತ್ತಿಬೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದಾಗಿ ಒಂದಿಷ್ಟು ವ್ಯತ್ಯಯವಾಗಿದೆ. ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಲು ೨೦ ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಕುಸುಮ್-ಸಿ ಯೋಜನೆಯಡಿ ೨,೫೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ, ಅಲ್ಲಿಯೇ ಪೂರೈಸಲಾಗುತ್ತದೆ. ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಸುವುದಾಗಿ ಸಚಿವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

20 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

30 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago