ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರು, ಕೃಷಿ ಪಂಪ್ ಸೇಟ್ಗಳಿಗೆ ನಿರಂತರವಾಗಿ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿದೆ. ಆದರೆ, ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ನಮ್ಮಲ್ಲಿ ಹೆಚ್ಚು ವಿದ್ಯುತ್ ಇದೆ. ಏಳು ಗಂಟೆ ಬದಲಾಗಿ ಕೃಷಿ ಪಂಪ್ ಸೆಟ್ಗಳಿಗೆ ೧೦ ಗಂಟೆ ಪೂರೈಸಬೇಕು ಎಂದು ಒತ್ತಾಯಿಸಿದರು.
ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಆನೇಕಲ್ ತಾಲ್ಲುಕಿನಲ್ಲಿ ೨೨ ಕೃಷಿ ಫೀಡರ್ಗಳಿವೆ. ಹಗಲಿನ ವೇಳೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ. ಸರ್ಜಾಪುರ ಮತ್ತು ಅತ್ತಿಬೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದಾಗಿ ಒಂದಿಷ್ಟು ವ್ಯತ್ಯಯವಾಗಿದೆ. ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಲು ೨೦ ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.
ಕುಸುಮ್-ಸಿ ಯೋಜನೆಯಡಿ ೨,೫೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ, ಅಲ್ಲಿಯೇ ಪೂರೈಸಲಾಗುತ್ತದೆ. ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಸುವುದಾಗಿ ಸಚಿವರು ತಿಳಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…