ಮೈಸೂರು : ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು.
ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಹಿಂದಿನ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದೆ. ಮಹಾರಾಣಿ ವಿಜ್ಞಾನ ಕಾಲೇಜು ಈಗಾಗಲೇ ಕುಸಿದಿದ್ದು, ಕಾಲೇಜು ಮುಂಭಾಗದಲ್ಲಿರುವ ಪಾರಂಪರಿಕ ಕಟ್ಟಡವನ್ನು ಬಲಪಡಿಸಲು ನಿರ್ದೇಶನ ನೀಡಲಾಗಿದೆ. ಉಳಿದವುಗಳನ್ನು ಪುನರ್ ನಿರ್ಮಿಸಲಾಗುವುದು. ರೂ. 17 ಕೋಟಿ ವೆಚ್ಚದಲ್ಲಿ ಕಲಾ ಕಾಲೇಜು, ರೂ.51 ಕೋಟಿ ವೆಚ್ಚದಲ್ಲಿ ವಿಜ್ಞಾನ ಕಾಲೇಜು, ರೂ.99 ಕೋಟಿ ವೆಚ್ಚದಲ್ಲಿ ವಸತಿ ನಿಲಯ ಹಾಗೂ ರೂ.40 ಕೋಟಿ ವೆಚ್ಚದಲ್ಲಿ ವಾಣಿಜ್ಯ ಕಾಲೇಜು ಕಟ್ಟಡ ನಿರ್ಮಾಣಮಾಡಲಾಗುವುದು ಎಂದು ಹೇಳಿದರು.
ಸರ್ಕಾರ ಬರ ಪರಿಹಾರ ಕಾಮಗಾರಿ ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ನೀಡಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯುತ್ ಅಭಾವ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಕೃತಕ ವಿದ್ಯುತ್ ಕೊರತೆಯನ್ನು ಸೃಷ್ಟಿಸಿಲ್ಲ. ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ಹೇಳಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…