ಮೈಸೂರು : ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು.
ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಹಿಂದಿನ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದೆ. ಮಹಾರಾಣಿ ವಿಜ್ಞಾನ ಕಾಲೇಜು ಈಗಾಗಲೇ ಕುಸಿದಿದ್ದು, ಕಾಲೇಜು ಮುಂಭಾಗದಲ್ಲಿರುವ ಪಾರಂಪರಿಕ ಕಟ್ಟಡವನ್ನು ಬಲಪಡಿಸಲು ನಿರ್ದೇಶನ ನೀಡಲಾಗಿದೆ. ಉಳಿದವುಗಳನ್ನು ಪುನರ್ ನಿರ್ಮಿಸಲಾಗುವುದು. ರೂ. 17 ಕೋಟಿ ವೆಚ್ಚದಲ್ಲಿ ಕಲಾ ಕಾಲೇಜು, ರೂ.51 ಕೋಟಿ ವೆಚ್ಚದಲ್ಲಿ ವಿಜ್ಞಾನ ಕಾಲೇಜು, ರೂ.99 ಕೋಟಿ ವೆಚ್ಚದಲ್ಲಿ ವಸತಿ ನಿಲಯ ಹಾಗೂ ರೂ.40 ಕೋಟಿ ವೆಚ್ಚದಲ್ಲಿ ವಾಣಿಜ್ಯ ಕಾಲೇಜು ಕಟ್ಟಡ ನಿರ್ಮಾಣಮಾಡಲಾಗುವುದು ಎಂದು ಹೇಳಿದರು.
ಸರ್ಕಾರ ಬರ ಪರಿಹಾರ ಕಾಮಗಾರಿ ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ನೀಡಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯುತ್ ಅಭಾವ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಕೃತಕ ವಿದ್ಯುತ್ ಕೊರತೆಯನ್ನು ಸೃಷ್ಟಿಸಿಲ್ಲ. ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…