ರಾಜ್ಯ

ಮೈಸೂರು ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಲಯ ನಿರ್ಮಾಣಕ್ಕೆ ರೂ.240 ಕೋಟಿ: ಸಿಎಂ ಸಿದ್ದರಾಮಯ್ಯ

ಮೈಸೂರು : ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು.

ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಹಿಂದಿನ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದೆ. ಮಹಾರಾಣಿ ವಿಜ್ಞಾನ ಕಾಲೇಜು ಈಗಾಗಲೇ ಕುಸಿದಿದ್ದು, ಕಾಲೇಜು ಮುಂಭಾಗದಲ್ಲಿರುವ ಪಾರಂಪರಿಕ ಕಟ್ಟಡವನ್ನು ಬಲಪಡಿಸಲು ನಿರ್ದೇಶನ ನೀಡಲಾಗಿದೆ. ಉಳಿದವುಗಳನ್ನು ಪುನರ್ ನಿರ್ಮಿಸಲಾಗುವುದು. ರೂ. 17 ಕೋಟಿ ವೆಚ್ಚದಲ್ಲಿ ಕಲಾ ಕಾಲೇಜು, ರೂ.51 ಕೋಟಿ ವೆಚ್ಚದಲ್ಲಿ ವಿಜ್ಞಾನ ಕಾಲೇಜು, ರೂ.99 ಕೋಟಿ ವೆಚ್ಚದಲ್ಲಿ ವಸತಿ ನಿಲಯ ಹಾಗೂ ರೂ.40 ಕೋಟಿ ವೆಚ್ಚದಲ್ಲಿ ವಾಣಿಜ್ಯ ಕಾಲೇಜು ಕಟ್ಟಡ ನಿರ್ಮಾಣಮಾಡಲಾಗುವುದು ಎಂದು ಹೇಳಿದರು.

ಸರ್ಕಾರ ಬರ ಪರಿಹಾರ ಕಾಮಗಾರಿ ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ನೀಡಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಅಭಾವ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಕೃತಕ ವಿದ್ಯುತ್ ಕೊರತೆಯನ್ನು ಸೃಷ್ಟಿಸಿಲ್ಲ. ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ಹೇಳಿದರು.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago