ರಾಜ್ಯ

ಬೆಂಗಳೂರಿನಲ್ಲಿ 2500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ
ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು
ಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ.

ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಭೈರಾರೆಡ್ಡಿ ಎಂಬುವವರು ಮಾರಸಂದ್ರದ ಮೀಸಲು ಅರಣ್ಯ ಸರ್ವೆ ನಂ182ರಲ್ಲಿ ಅರಣ್ಯ ಇಲಾಖೆಗೆ ಸೇರಿದ 2.10 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಸಂಬಂಧ ಎಫ್.ಐ.ಆರ್. ದಾಖಲಿಸಿಕೊಂಡಿದ್ದ ಬೆಂಗಳೂರು ನಗರ ಜಿಲ್ಲೆಯ ಅರಣ್ಯಾಧಿಕಾರಿಗಳು ಜೆಸಿಬಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ.ಗೂ ಅಧಿಕ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ 1 ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು:
ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ರಾಜಧಾನಿಯಲ್ಲಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಒತ್ತುವರಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದು, ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ.

ಕಗ್ಗಲಿಪುರ ವಲಯದ ಬಿಎಂ ಕಾವಲಿನಲ್ಲಿ 27.2 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯ ಮೈಲಸಂದ್ರ, ಬಿ.ಎಂ. ಕಾವಲ್ ಮತ್ತು ಕೆಂಚೇನಹಳ್ಳಿಯಲ್ಲಿ 16.9 ಎಕರೆ, ಸೂಲಿಕೆರೆ ಮೀಸಲು ಅರಣ್ಯ ಪ್ರದೇಶದ ಸೂಲಿಕೆರೆಯಲ್ಲಿ 2.5 ಎಕರೆ, ಯು.ಎಂ. ಕಾವಲ್ ನಲ್ಲಿ 1 ಎಕರೆ, ಆನೆಕಲ್ ವಲಯದ ಭೂತನಹಳ್ಳಿ, ರಾಗಿಹಳ್ಳಿಯಲ್ಲಿ 14.4 ಎಕರೆ, ಬೆಂಗಳೂರು, ಜಾರಕಬಂಡೆ ಕಾವಲು, ಪೀಣ್ಯದಲ್ಲಿ 18 ಎಕರೆ, ಯಲಹಂಕ ವಲಯದ ಕೊತ್ತನೂರಿನಲ್ಲಿ 17.3 ಎಕರೆ, ಮಾರಸಂದ್ರದಲ್ಲಿ 2.10 ಎಕರೆ, ಇತರೆ 3 ಎಕರೆ 6 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ.

ತೆರವು ಮಾಡಲಾಗಿರುವ ಭೂಮಿಯ ಒಟ್ಟು ಮೌಲ್ಯ 3000 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಇದಲ್ಲದೆ ಕೊತ್ತನೂರಿನಲ್ಲಿ ಇನ್ನೂ48ರಲ್ಲಿ ಸುಮಾರು 700 ಕೋಟಿ ರೂ. ಬೆಲೆ ಬಾಳುವ 22 ಎಕರೆ 08 ಗುಂಟೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಇದನ್ನು ತೆರವು ಮಾಡಲು ಕಾನೂನು ಕ್ರಮಕ್ಕ ಮುಂದಾಗುವಂತೆ ಕೂಡ ಈಶ್ವರ ಖಂಡ್ರೆ ಈಗಾಗಲೇ ಸೂಚನೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago