ರಾಜ್ಯ

ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜನೆ ; 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಹಾಸನ : ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ,  ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ.

ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ ರೂ. ಬೆಲೆ ಬಾಳುವ 26 ಎಕರೆ 33 ಗುಂಟೆ ಅರಣ್ಯ ಜಮೀನನ್ನು ಕೆಲವರು ಒತ್ತುವರಿ ಮಾಡಿ, ಇಲ್ಲಿದ್ದ ಮರಗಳನ್ನು ಕಡಿದು ತೋಟ ಮಾಡುವ ದುಸ್ಸಾಹಸ ಮಾಡಿದ್ದರು. ಈ ಬಗ್ಗೆ ಕಚೇರಿಗೆ ಬಂದ ದೂರು ಆಧರಿಸಿ ಈಶ್ವರ ಖಂಡ್ರೆ, ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಕಳೆದ ಅಕ್ಟೋಬರ್ 23ರಂದು ಸ್ಪಷ್ಟ ಸೂಚನೆ ನೀಡಿದ್ದರು.

ಸದರಿ ಜಮೀನು ಮೀಸಲು ಅರಣ್ಯವಾಗಿದ್ದು, ಅರಣ್ಯ ಒತ್ತುವರಿ ಮಾಡಿ ಮರ, ಗಿಡ ನಾಶ ಮಾಡಿ, ತೋಟ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಇಂದು ಬೆಳಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ತೆರಳಿ, ಅರಣ್ಯ ಭೂಮಿ ತೆರವು ಮಾಡಿ, ಸ್ಥಳೀಯ ಪ್ರಬೇಧದ ಸಸಿಗಳನ್ನು ನೆಟ್ಟು, ಫಲಕ ಹಾಕಿದ್ದಾರೆ.

ಖಂಡ್ರೆ ಕ್ರಮಕ್ಕೆ ಗ್ರಾಮಸ್ಥರ ಮೆಚ್ಚುಗೆ:
ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಶುಂಠಿ ಬೆಳೆಯುವ ಹೆಸರಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು, ಅರಣ್ಯ ಭೂಮಿ ಕಬಳಿಸಿ, ಬೆಲೆ ಬಾಳುವ ಮರ ಕಡಿದು ನಂತರ ತೋಟ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಅರಣ್ಯ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡುತ್ತಿದ್ದಾರೆ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಮೇಲೆ ಇಂತಹ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಎಂದು ತಿಳಿಸಿದ್ದಾರೆ.

ಎಚ್ಚರಿಕೆಯ ಗಂಟೆ:
ಅರಣ್ಯ ಭೂಮಿಯನ್ನು ಮನಸೋ ಇಚ್ಛೆ ಒತ್ತುವರಿ ಮಾಡಿ ತೆಂಗು, ಕಾಫಿ ಮತ್ತು ಅಡಿಕೆ ತೋಟ ಮಾಡುತ್ತಿದ್ದವರಿಗೆ ಮಡಬ ಅರಣ್ಯ ತೆರವು ಎಚ್ಚರಿಕೆಯ ಗಂಟೆಯಾಗಿದೆ. ಇಂದಿನ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago