ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 296 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 50 ಜನ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1245 ಮುಟ್ಟಿದೆ. ಕೊನೆಯ 24 ಗಂಟೆಗಳಲ್ಲಿ 5021 ಟೆಸ್ಟ್ಗಳು ನಡೆದಿವೆ, 4036 ಆರ್ಟಿಪಿಸಿಆರ್ ಟೆಸ್ಟ್ಗಳು ನಡೆದಿವೆ ಹಾಗೂ 985 ರ್ಯಾಟ್ ಟೆಸ್ಟ್ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 5.89% ಇದೆ. ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 55 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ.
ಒಟ್ಟು 1245 ಸಕ್ರಿಯ ಪ್ರಕರಣಗಳ ಪೈಕಿ 1179 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 66 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 20 ಸೋಂಕಿತರು ಐಸಿಯುನಲ್ಲಿದ್ದು, 46 ಸೋಂಕಿತರು ಸಾಮಾನ್ಯ ವಾರ್ಡ್ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 29, ಮಂಡ್ಯದಲ್ಲಿ 9 ಹಾಗೂ ಚಾಮರಾಜನಗರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 109, ಮಂಡ್ಯದಲ್ಲಿ 46, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 30 ಸಕ್ರಿಯ ಪ್ರಕರಣಗಳಿವೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…