ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಜನವರಿ.11) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಹಾಗೂ ಲಿಂಗಾಯತ ಉಪ ಪಂಗಡಗಳಿಗೆ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಈ ಹೋರಾಟವನ್ನು ಮಾಡಲಾಗುತ್ತಿದೆ. ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದ್ದರು. ಹೀಗಾಗಿ ಲಾಠಿಚಾರ್ಜ್ ವೇಳೆ ಗಾಯಗೊಂಡಿದ್ದ ಹೋರಾಟಗಾರರಿಗೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ವೀರ ಎಂಬ ಬಸವರಕ್ಷೆ ನೀಡುತ್ತೇವೆ ಎಂದಿದ್ದಾರೆ.
ಈ ಬಾರಿ ರಾಜ್ಯಾದ್ಯಾಂತ ಹಳ್ಳಿ-ಹಳ್ಳಿಗಳಲ್ಲಿ ʼಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನʼ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಅಲ್ಲದೇ ಈ ವೇಳೆ ಸಾರ್ವಜನಿಕರ ಹತ್ತಿರ ಹೋಗಿ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಗುರಿ ಸಾಧಿಸುತ್ತೇವೆ. ಹಾಗಾಗಿ ಈ ಹೋರಾಟದಲ್ಲಿ ಪಂಚಮಸಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…