ರಾಜ್ಯ

ಬೆಂಗಳೂರಿಗೆ 2ನೇ ಏರ್‌ಪೊರ್ಟ್:‌ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದೇನು?

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ಮೊದಲನೇ ಸಾಲಿನಲ್ಲಿದೆ. ಜೊತೆಗೆ ಜಾಗತಿಕ ಮಟ್ಟದಲ್ಲೂ ಕೂಡ ಗಮನ ಸೆಳೆದಿದೆ. ಈ ಕಾರಣಕ್ಕೆ ಬೆಂಗಳೂರಿಗೆ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ವಿಮಾನ ನಿರ್ಮಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸಚಿವ ಎಂ.ಬಿ ಪಾಟೀಲ್‌ ಅವರು ಗುರುವಾರ(ಜೂ.20) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚಿಸಿ, ಡಿಪಿಆರ್‌ ಸಿದ್ಧಪಡಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಶುಕ್ರವಾರ(ಜೂ.21) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ, ರಾಜ್ಯ ಸರ್ಕಾರಕ್ಕೂ ಒಪ್ಪಂದ ಇದೆ. ಆ ಒಪ್ಪಂದ ಪ್ರಕಾರ 2033ರವರೆಗೆ ಬೇರೊಂದು ವಿಮಾನ ನಿಲ್ದಾಣ ಮಾಡುವುದಕ್ಕೆ ಅವಕಾಶ ಇಲ್ಲ. ಆ ಒಪ್ಪಂದ ಮುಗಿದಾಗ. ನಾವು ಎರಡನೇ ವಿಮಾನ ನಿಲ್ದಾಣ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲೋಡ್‌ ಬಗ್ಗೆ ಗುರುವಾರ ಅಧಿಕಾರಗಳೊಂದಿಗೆ ಚರ್ಚೆ ಮಾಡಿದ್ದೇವೆ. 2032ರ ಹೊತ್ತಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜನಸಂದಣಿ ಆಗಿಬಿಡುತ್ತದೆ. ಬೆರೊಂದು ವಿಮಾನ ನಿಲ್ದಾಣ ಅವಶ್ಯಕತೆ ಇದೆ. ಈಗಾಗಲೇ ಮುಂಬೈ, ಗೋವಾ ಹಾಗೂ ದೆಹಲಿಯಲ್ಲಿ ಹೊಸ ವಿಮಾನ ನಿಲ್ದಾಣ ಇವೆ. ಮುಂದಿನ ದಿನಗಳು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೇ ಬೇಕು ಎಂದು ಸ್ಪಷ್ಟಪಡಿಸಿದ ಅವರು, ನಿನ್ನೆ ಪ್ರಾಥಮಿಕವಾಗಿ ಚರ್ಚೆ ಮಾಡಿದ್ದೀವಿ ಅಷ್ಟೆ. ಎಷ್ಟು ಎಕರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎಂದು ನಿರ್ಧಾರ ಮಾಡಿಲ್ಲ ಎಂದರು.

ಇನ್ನೂ 9 ವರ್ಷಗಳಲ್ಲಿ ಬಿಐಎಎಲ್‌ ಷರತ್ತು ಅಂತ್ಯ:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯು ಮುಂದಿನ 25 ವರ್ಷಗಳವರೆಗೆ 150 ಕಿ.ಮೀ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ ಎಂದು ರಾಜ್ಯ ಸರ್ಕಾರದೊಂದಿಗೆ ಷರತ್ತು ಮಾಡಿಕೊಂಡಿತ್ತು. ಈ ಷರತ್ತು ಮುಗಿಯಲು ಇನ್ನೂ 9 ವರ್ಷಗಳು ಬೇಕಾಗಿದೆ.  ಆಗಾಗಿ ಈಗಿನಿಂದಲೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

23 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

23 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

23 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

23 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

23 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

23 hours ago