ಬೆಂಗಳೂರು: ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬ ದೃಷ್ಠಿಯಿಂದ ಹೆಚ್ಚುವರಿ ಮೂರು ಉಪಮುಖ್ಯಮಂತ್ರಿ ಹುದ್ದೆ ಕೇಳಿದರೆ ತಪ್ಪಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
೨೦೨೪ರ ಲೋಕಸಭಾ ಚುನಾವಣೆಗು ಮುನ್ನ ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ಕೆ.ಎನ್ ರಾಜಣ್ಣ ಮಾತನಾಡಿದ್ದು, ಇದರ ಸಂಬಂಧ ಸಚಿವ ಎಚ್.ಸಿ ಮಹೇವಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಹಿರಿಯ ನಾಯಕರಾದ ಕೆ.ಎನ್ ರಾಜಣ್ಣ ಅವರು ರಾಜಕೀಯ ವಿಶ್ಲೇಷಣೆ ಮಾಡಿ ಹೀಗೆ ಹೇಳಿದ್ದಾರೆ. ಆದರೆ ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೦ ರಂದು ಎಐಸಿಸಿಯಿಂದ ವೀಕ್ಷಕರು ಬರಲಿದ್ದಾರೆ. ಅವರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ಮಹದೇವಪ್ಪ ಹೇಳಿದರು.
ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸಚಿವರನ್ನು ಅಖಾಡಕ್ಕೆ ಇಳಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತಾ ಹೈಕಮಾಂಡ್ ಏನು ನಿರ್ಧಾರ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…