Mysore
31
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ರಾಜ್ಯದ ಮೂವರಿಗೆ ಪದಶ್ರೀ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯದ ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್‌ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಡಾ. ವಿಜಯಲಕ್ಷ್ಮಿ ದೇಶಮಾನೆ:

ಸಾಕ್ಷಾತ್‌ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ. ವಿಜಯಲಕ್ಷ್ಮಿ ದೇಶಮಾನೆ, ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್‌ ತಜ್ಞೆಯಾಗಿದ್ದಾರೆ.

ವೆಂಕಪ್ಪ ಅಂಬಾಜೀ ಸುಗಟ್ಕೇರ್‌:

81 ವರ್ಷದ ವೆಂಕಪ್ಪ ಅಂಬಾಜೀ ಕರ್ನಾಟಕದ ಪ್ರಸಿದ್ಧ ಜಾನಪದ ಗಾಯಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ಕಿಬಾತ್‌ನಲ್ಲಿ ವೆಂಕಪ್ಪನ ಹೆಸರು ಉಲ್ಲೇಖಿಸಿದ್ದರು.

ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ;

ತೊಗಲುಬೊಂಬೆಯಾಟದ ಹಿರಿಯ ಕಲಾವಿದರಾಗಿರುವ ಭೀಮವ್ವ ಕೊಪ್ಪಳ ಮೂಲದವರಾಗಿದ್ದಾರೆ.

Tags: