ರಾಜ್ಯ

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆಯನು ಗುರುವಾರ ಮಂಡಿಸಲಾಗಿದೆ.

ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ ಸಭೆ–ಪಂಚಾಯಿತಿ ನಡೆಸುವುದು, ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಲಿದೆ.

ನ್ಯಾಯಾಧೀಶರಿಗೆ ನೇರವಾಗಿ ದೂರು

ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದು.

ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶಿಸಬಹುದು. ಪೀಡಿತರಿಗೆ ಸಹಾಯ ಒದಗಿಸಲು ಸೂಚಿಸಬಹುದು. ದಂಡದ ಮೊತ್ತವನ್ನು ಪೀಡಿತರಿಗೆ ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಡಿಸಿಗಳಿಗೂ ಕೆಲ ಅಧಿಕಾರ ಕೊಡಲಾಗಿದೆ. ಇನ್ನು ಸಾಮಾಜಿಕ ಬಹಿಷ್ಕಾರ ತಡೆಗೆ ಅಧಿಕಾರಿಗಳನ್ನು ನಿಯೋಜಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ.

ಯಾವುದೆಲ್ಲ ನಿಷೇಧ?

* ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು

* ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ

* ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು

* ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು

* ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು

* ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು

* ವಿವಿಧ ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು

* ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸು ವುದಕ್ಕೆ ತಡೆಯೊಡ್ಡುವುದು

* ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು

* ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು

* ಮಾನವ ಹಕ್ಕುಗಳನ್ನು ನಿರಾಕರಿಸುವುದು

* ಲಿಂಗತ್ವ, ವರ್ಣ, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

54 mins ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

1 hour ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

7 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 hours ago