ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ.
ಹೌದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು ದಾಖಲಾಗಿವೆ. ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ನಲ್ಲಿರುವ ಮಹಳಾ ಸಂತ್ರಸ್ತೆಯರು ಈ ಕರೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದುವರೆಗೂ ಯಾವುದೇ ಸಂತ್ರಸ್ತೆಯರು ದೂರು ನೀಡಲು ಮುಂದಾಗಿಲ್ಲ. ಈವರೆಗೆ ಕರೆ ಮಾಡಿರುವ ಸಂತ್ರಸ್ತೆಯರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಆದರೆ ಈವರೆಗೆ ಯಾರು ದೂರನ್ನು ನೋಂದಾಯಿಸಿಲ್ಲ.
ಹೆಲ್ಪ್ಲೈನ್ಗೆ ನೀವು ನಿಮ್ಮ ವಿಳಾಸ ಹೇಳಿದರೇ ನಾವೇ ಖುದ್ದು ಬಂದು ನಿಮ್ಮ ಬಳಿ ದೂರುಗಳನ್ನು ದಾಖಲಿಸುತ್ತೇವೆ. ನಿಮ್ಮ ಗುರುತು ಮತ್ತು ವಿಳಾಸವನ್ನು ನಾವು ಯಾರಿಗೂ ತಿಳಿಸುವುದಿಲ್ಲ. ಎಲ್ಲಾ ವಿಚಾರದಲ್ಲಿಯೂ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಎಸ್ಐಟಿ ಸಹಾಯವಾಣಿ ಹೇಳಿದೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…