ರಾಜ್ಯ

ರಾಜ್ಯದಿಂದ 300 ಮೆ.ವ್ಯಾ. ಸೌರ ವಿದ್ಯುತ್‌ ಖರೀದಿಗೆ ಜೆಎಸ್‌ಡಬ್ಲ್ಯೂ ಸಹಿ: ಕೆ.ಜೆ. ಜಾರ್ಜ್‌

ಬೆಂಗಳೂರು: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.

ಸೌರ ವಿದ್ಯುತ್‌ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್‌ ಅವರು, “ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿರುವುದರಿಂದ ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ,”ಎಂದು ತಿಳಿಸಿದ್ದಾರೆ.

“2044ರ ಹಣಕಾಸು ವರ್ಷದವರೆಗೆ ಪ್ರತಿ ಕಿ.ವ್ಯಾ.ಹೆಚ್‌.ಗೆ 2.89 ರೂ.ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲಿದ್ದು, ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತವು 2024ರ ಜುಲೈ 22 ರಂದು ಒಪ್ಪಿಗೆ ಪತ್ರ ನೀಡಿತ್ತು. ನಂತರ ಈ ವಿದ್ಯುತ್‌ ಖರೀದಿ ಒಪ್ಪಿಗೆ ಏರ್ಪಟ್ಟಿದೆ,”ಎಂದು ಹೇಳಿದ್ದಾರೆ.

“ನವೀಕರಿಸಬಹುದಾದ ಇಂಧನ ನೀತಿಯನ್ನು 2009ರಲ್ಲೇ ಅಧಿಸೂಚಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ ಆಗುತ್ತಿದೆ. ನವೀಕರಿಸಬಹುದಾದದ ಇಂಧನ ನೀತಿಯ ಫಲ ಈಗ ಕಾಣುತ್ತಿದ್ದೇವೆ,”ಎಂದಿದ್ದಾರೆ.

“ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ‌ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ,”ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

17 mins ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

11 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

12 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

12 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

12 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

14 hours ago