ಬೆಂಗಳೂರು: ಪಾವಗಡದ ಸೋಲಾರ್ ಪಾರ್ಕ್ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಸೌರ ವಿದ್ಯುತ್ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್ ಅವರು, “ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿರುವುದರಿಂದ ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ,”ಎಂದು ತಿಳಿಸಿದ್ದಾರೆ.
“2044ರ ಹಣಕಾಸು ವರ್ಷದವರೆಗೆ ಪ್ರತಿ ಕಿ.ವ್ಯಾ.ಹೆಚ್.ಗೆ 2.89 ರೂ.ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಿದ್ದು, ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತವು 2024ರ ಜುಲೈ 22 ರಂದು ಒಪ್ಪಿಗೆ ಪತ್ರ ನೀಡಿತ್ತು. ನಂತರ ಈ ವಿದ್ಯುತ್ ಖರೀದಿ ಒಪ್ಪಿಗೆ ಏರ್ಪಟ್ಟಿದೆ,”ಎಂದು ಹೇಳಿದ್ದಾರೆ.
“ನವೀಕರಿಸಬಹುದಾದ ಇಂಧನ ನೀತಿಯನ್ನು 2009ರಲ್ಲೇ ಅಧಿಸೂಚಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ ಆಗುತ್ತಿದೆ. ನವೀಕರಿಸಬಹುದಾದದ ಇಂಧನ ನೀತಿಯ ಫಲ ಈಗ ಕಾಣುತ್ತಿದ್ದೇವೆ,”ಎಂದಿದ್ದಾರೆ.
“ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ,”ಎಂದು ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…