ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ ಸಭೆ ನಡೆಸಿ, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಪುನಾರಂಭ ಮಾಡಿರುವ ಬಗ್ಗೆ ಕೆಲವರು ಮಾತ್ರವೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕಾಗಿ ಅವರಿಗೆ ಮನವರಿಕೆ ಮಾಡಿ ಜೊತೆಗೆ ಯುವಜನರಿಗೆ ಕೌಶಲ್ಯ ತರಬೇತಿ ನೀಡಬೇಕು, ಕಾಡಿನಂಚಿನ ಶಾಲೆ ಕಾಲೇಜುಗಳಿಗೆ ಅಗತ್ಯ ಸಲಕರಣೆ ನೀಡಬೇಕು. ವನ್ಯಜೀವಿಗಳು ನಾಡಿಗೆ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಅರಿವು ಮೂಡಿಸಲೂ ತಿಳಿಸಿದರು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಎ.ಪಿಸಿಸಿಎಫ್ ಬಿಸ್ವಜಿತ್ ಮಿಶ್ರ, ಮನೋಜ್ ರಾಜನ್, ಸಿಎಫ್ ಪ್ರಭಾಕರನ್, ಕೊಪ್ಪ ವಲಯದ ಡಿಸಿಎಫ್ ಶಿವಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.
ಹಿರಿಯ ಅಧಿಕಾರಿಗಳು ಕ್ಷೇತ್ರಕ್ಕೆ ಹೋಗುವಂತೆ ಸೂಚನೆ
ಬೇಸಿಗೆ ಹಿನ್ನೆಲೆಯಲ್ಲಿ ಮುಂದಿನ 2-3 ತಿಂಗಳು ಅತ್ಯಂತ ಕ್ಲಿಷ್ಟಕರವಾಗಿದ್ದು, ಹಿರಿಯ ಅಧಿಕಾರಿಗಳು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಕ್ಕೆ ತೆರಳಿ, ಅಧಿಕಾರಿ, ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…