ಬೆಂಗಳೂರು : ದ್ವಿದಳ ಧಾನ್ಯ ಬೆಳೆಯಲು ರೈತರಿಗೆ ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಸಾವಿರ ಕೋಟಿ ರೂ.ನಷ್ಟು ಅನುದಾನ ಒದಗಿಸಲಾಗಿದೆ ಎಂದು ಕೇಂದ್ರ ಬೃಹತ್ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಯಲಹಂಕದಲ್ಲಿ ರಾಷ್ಟ್ರೀಯ ಕೃಷಿ ಕೀಟ ಸಂಪನೂಲ ಬ್ಯೂರೋದ 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿಕೀಟ ಜೈವಿಕ ನಿಯಂತ್ರಣದ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೇಳೆಕಾಳುಗಳನ್ನು ಬೆಳೆಯಲು ರೈತರು ಮುಂದಾಗಬೇಕೆಂದು ಪ್ರಧಾನಿ ನರೇಂದ್ರಮೋದಿ ಅವರು ಸಲಹೆ ಮಾಡಿದ್ದಾರೆ. ಅಕ್ಕಿಯಿಂದಲೇ ಪೌಷ್ಠಿಕತೆ ಸಾಧ್ಯವಿಲ್ಲ. ಹೀಗಾಗಿ ದ್ವಿದಳ ಧಾನ್ಯ ಪೌಷ್ಟಿಕತೆ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು.
ಇದನ್ನು ಓದಿ: ಅ.31 ರವರೆಗೆ ಸಮೀಕ್ಷೆ ವಿಸ್ತರಣೆ
ಪ್ರಧಾನಿಯವರು ಕೃಷಿಗೆ ಹೆಚ್ಚು ಒತ್ತು ನೀಡಿದ್ದಾರೆ. ರಾಷ್ಟ್ರವು ಕೃಷಿ ಕ್ಷೇತ್ರದಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದೆ. ರೈತರ ಬಗ್ಗೆ ಕಳಕಳಿ ಹೊಂದಿರುವ ಮೋದಿಯವರು ರೈತರಿಗೆ ಆರ್ಥಿಕಶಕ್ತಿ ತುಂಬಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕಳಪೆ ರಸಗೊಬ್ಬರ ಮಾರಾಟವಾಗುತ್ತಿದೆ. ಇದರಿಂದ ಭೂಮಿಯ ಫಲವತ್ತತೆ ನಾಶವಾಗುವುದಲ್ಲದೆ, ಆಹಾರದ ಉತ್ಪಾದನೆಯಲ್ಲು ಕುಂಠಿತವಾಗುತ್ತದೆ. ಕಪ್ಪು ತಲೆ ಹುಳುವಿನ ಬಾಧೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹುಳುಗಳ ಬಾಧೆಗೆ ನನ್ನ ತೆಂಗಿನ ತೋಟವು ಒಳಗಾಗಿದೆ. ತೆಂಗಿನ ಮರದ ಗರಿಗಳು ಒಣಗುತ್ತಿವೆ. ಕ್ರಿಮಿನಾಶಕವನ್ನು ಅನಿಯಂತ್ರಿತವಾಗಿ ಬಳಸುವುದರಿಂದ ರೈತರ ಬದುಕು ಹಾಳಾಗುತ್ತಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ರೈತರನ್ನು ಸನಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…