ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು.
ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಬಾರಿ ರಾಯರ ಆರಾಧನೆಯಲ್ಲಿ 67 ಲಕ್ಷ ಮಂದಿ ಭಾಗಿಯಾಗಿದ್ದರು. ಮೊದಲಿಗೆ ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ ನಂತರ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾಗಿದ್ದಾರೆ.
ರಾಘವೇಂದ್ರ ಸ್ವಾಮಿಗಳ ಆರಾಧನೆ ಮುಗಿದ ಬಳಿಕ ಇಂದು ಮಠದ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ಮಠದ ಕಾರಿಡಾರ್ನಲ್ಲಿ 350 ಕಲಾವಿದರಿಂದ ನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆದಿದೆ.
ಸ್ಥಳೀಯರು, ಜರ್ಮನಿ, ಇಂಡೋನೇಷಿಯಾ ಸೇರಿದಂತೆ ಅನೇಕ ಕಡೆಗಳಿಂದ ಆಗಮಿಸಿದ್ದ 350 ನೃತ್ಯ ಕಲಾವಿದರು ಏಕಕಾಲದಲ್ಲಿ ನೃತ್ಯ ಪ್ರದರ್ಶಿಸಿದರು.
ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀನಾಮ ರಾಮಾಯಣಂ ಗೀತೆಗೆ ನೃತ್ಯ ಮಾಡುವ ಮೂಲಕ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ದಾಖಲೆ ಬರೆಯಲು ಕಲಾವಿದರು ನೃತ್ಯ ಪ್ರದರ್ಶನ ಮಾಡಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…