ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು.
ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಬಾರಿ ರಾಯರ ಆರಾಧನೆಯಲ್ಲಿ 67 ಲಕ್ಷ ಮಂದಿ ಭಾಗಿಯಾಗಿದ್ದರು. ಮೊದಲಿಗೆ ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ ನಂತರ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾಗಿದ್ದಾರೆ.
ರಾಘವೇಂದ್ರ ಸ್ವಾಮಿಗಳ ಆರಾಧನೆ ಮುಗಿದ ಬಳಿಕ ಇಂದು ಮಠದ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ಮಠದ ಕಾರಿಡಾರ್ನಲ್ಲಿ 350 ಕಲಾವಿದರಿಂದ ನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆದಿದೆ.
ಸ್ಥಳೀಯರು, ಜರ್ಮನಿ, ಇಂಡೋನೇಷಿಯಾ ಸೇರಿದಂತೆ ಅನೇಕ ಕಡೆಗಳಿಂದ ಆಗಮಿಸಿದ್ದ 350 ನೃತ್ಯ ಕಲಾವಿದರು ಏಕಕಾಲದಲ್ಲಿ ನೃತ್ಯ ಪ್ರದರ್ಶಿಸಿದರು.
ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀನಾಮ ರಾಮಾಯಣಂ ಗೀತೆಗೆ ನೃತ್ಯ ಮಾಡುವ ಮೂಲಕ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ದಾಖಲೆ ಬರೆಯಲು ಕಲಾವಿದರು ನೃತ್ಯ ಪ್ರದರ್ಶನ ಮಾಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…