ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು.
ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಬಾರಿ ರಾಯರ ಆರಾಧನೆಯಲ್ಲಿ 67 ಲಕ್ಷ ಮಂದಿ ಭಾಗಿಯಾಗಿದ್ದರು. ಮೊದಲಿಗೆ ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ ನಂತರ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾಗಿದ್ದಾರೆ.
ರಾಘವೇಂದ್ರ ಸ್ವಾಮಿಗಳ ಆರಾಧನೆ ಮುಗಿದ ಬಳಿಕ ಇಂದು ಮಠದ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ಮಠದ ಕಾರಿಡಾರ್ನಲ್ಲಿ 350 ಕಲಾವಿದರಿಂದ ನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆದಿದೆ.
ಸ್ಥಳೀಯರು, ಜರ್ಮನಿ, ಇಂಡೋನೇಷಿಯಾ ಸೇರಿದಂತೆ ಅನೇಕ ಕಡೆಗಳಿಂದ ಆಗಮಿಸಿದ್ದ 350 ನೃತ್ಯ ಕಲಾವಿದರು ಏಕಕಾಲದಲ್ಲಿ ನೃತ್ಯ ಪ್ರದರ್ಶಿಸಿದರು.
ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀನಾಮ ರಾಮಾಯಣಂ ಗೀತೆಗೆ ನೃತ್ಯ ಮಾಡುವ ಮೂಲಕ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ದಾಖಲೆ ಬರೆಯಲು ಕಲಾವಿದರು ನೃತ್ಯ ಪ್ರದರ್ಶನ ಮಾಡಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…