ರಾಜ್ಯ

ಕೆಮ್ಮಿನ ಸಿರಪ್‌ನ 390 ಸ್ಯಾಂಪಲ್‌ ತಪಾಸಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಕೆಮ್ಮಿನ ಸಿರಪ್‌ ಔಷಧಗಳ 390 ಸ್ಯಾಂಪಲ್‌ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್‌ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್‌ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್‌ ಬಂದಿಲ್ಲ. ಎಲ್ಲಾ ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವ್ಯವಸ್ಥೆ ಇರಬಾರದು. ನಿಮಯಗಳ ಪ್ರಕಾರ ಔಷಧ ತಯಾರು ಮಾಡಬೇಕು. ಹಾಗಾಗಿ ಅದನ್ನೆಲ್ಲಾ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಅವರು, ನಮಗಂತೂ ಈ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸಿಎಂ ಊಟಕ್ಕೆ ಕರೆದಿರೋದು ಅವರಿಗಷ್ಟೇ ಗೊತ್ತಿರುತ್ತದೆ. ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಅದೇ ಸ್ಪಷ್ಟನೆ. ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ. ಅಧ್ಯಕ್ಷರೇ ಹೇಳಿದ ಮೇಲೆ ಇನ್ನೇನು, ಗಾಳಿ ಸುದ್ದಿಗೆಲ್ಲಾ ಹೈಕಮಾಂಡ್‌ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

8 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

8 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

9 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

11 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

12 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

13 hours ago