ರಾಜ್ಯ

ಕೆಮ್ಮಿನ ಸಿರಪ್‌ನ 390 ಸ್ಯಾಂಪಲ್‌ ತಪಾಸಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಕೆಮ್ಮಿನ ಸಿರಪ್‌ ಔಷಧಗಳ 390 ಸ್ಯಾಂಪಲ್‌ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್‌ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್‌ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್‌ ಬಂದಿಲ್ಲ. ಎಲ್ಲಾ ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವ್ಯವಸ್ಥೆ ಇರಬಾರದು. ನಿಮಯಗಳ ಪ್ರಕಾರ ಔಷಧ ತಯಾರು ಮಾಡಬೇಕು. ಹಾಗಾಗಿ ಅದನ್ನೆಲ್ಲಾ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಅವರು, ನಮಗಂತೂ ಈ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸಿಎಂ ಊಟಕ್ಕೆ ಕರೆದಿರೋದು ಅವರಿಗಷ್ಟೇ ಗೊತ್ತಿರುತ್ತದೆ. ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಅದೇ ಸ್ಪಷ್ಟನೆ. ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ. ಅಧ್ಯಕ್ಷರೇ ಹೇಳಿದ ಮೇಲೆ ಇನ್ನೇನು, ಗಾಳಿ ಸುದ್ದಿಗೆಲ್ಲಾ ಹೈಕಮಾಂಡ್‌ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago