ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗು ಬೀದರ್ ಜಿಲ್ಲೆಯ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಜೈವಿಕ ತಂತ್ರಜ್ಞಾನ, ಕೃಷಿ, ಪಶುಸಂಗೋಪನೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್, ಎವಿಜಿಸಿ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ನವೋದ್ಯಮಿಗಳು ಆರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವುಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದೂ ಸಚಿವರು ಹೇಳಿದ್ದಾರೆ.
ಸಹಾಯಧನಕ್ಕೆ ಆಯ್ಕೆಗೊಂಡಿರುವ 19 ನವೋದ್ಯಮಿಗಳನ್ನು ಅಭಿನಂದಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಇನ್ನೂ ಹೆಚ್ಚು ಯುವಕ ಯುವತಿಯರು ನವೋದ್ಯಮಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಕಾರಣರಾಗಬೇಕೆಂದು ಕರೆಕೊಟ್ಟಿದ್ದಾರೆ.
ರಾಜ್ಯದ ರಾಜಧಾನಿಯಾದ ಬೆಂಗಳೂರು ಹಾಗೂ ದಕ್ಷಿಣ ಭಾಗದಲ್ಲಿ ಮಾತ್ರ ನವೋದ್ಯಮಗಳನ್ನು ಆರಂಭಿಸುತ್ತಿದ್ದ ಪರಂಪರೆಯನ್ನು ಬದಲಿಸಿ ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆಗೂ ಅವಕಾಶ ನೀಡಿರುವುದಾಗಿ ತಿಳಿಸಿರುವ ಸಚಿವರು ಈ ಭಾಗದಲ್ಲಿ ನವೋದ್ಯಮಗಳನ್ನು ಆರಂಭಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳುವುದರೊಂದಿಗೆ ಸ್ಥಳಿಯ ಅರ್ಹ ಯುವ ಜನಾಂಗಕ್ಕೆ ಉದ್ಯೋಗ ದೊರೆಕಿಸಿಕೊಡಲು ಕಾರಣರಾಗಬೇಕೆಂದು ಹೇಳಿದ್ದಾರೆ.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…