ರಾಜ್ಯ

ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶಗಳಿಗೆ ಧನಸಹಾಯ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್‌ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗು ಬೀದರ್‌ ಜಿಲ್ಲೆಯ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಜೈವಿಕ ತಂತ್ರಜ್ಞಾನ, ಕೃಷಿ, ಪಶುಸಂಗೋಪನೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್‌, ಎವಿಜಿಸಿ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ನವೋದ್ಯಮಿಗಳು ಆರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವುಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಸಹಾಯಧನಕ್ಕೆ ಆಯ್ಕೆಗೊಂಡಿರುವ 19 ನವೋದ್ಯಮಿಗಳನ್ನು ಅಭಿನಂದಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಇನ್ನೂ ಹೆಚ್ಚು ಯುವಕ ಯುವತಿಯರು ನವೋದ್ಯಮಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಕಾರಣರಾಗಬೇಕೆಂದು ಕರೆಕೊಟ್ಟಿದ್ದಾರೆ.

ರಾಜ್ಯದ ರಾಜಧಾನಿಯಾದ ಬೆಂಗಳೂರು ಹಾಗೂ ದಕ್ಷಿಣ ಭಾಗದಲ್ಲಿ ಮಾತ್ರ ನವೋದ್ಯಮಗಳನ್ನು ಆರಂಭಿಸುತ್ತಿದ್ದ ಪರಂಪರೆಯನ್ನು ಬದಲಿಸಿ ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆಗೂ ಅವಕಾಶ ನೀಡಿರುವುದಾಗಿ ತಿಳಿಸಿರುವ ಸಚಿವರು ಈ ಭಾಗದಲ್ಲಿ ನವೋದ್ಯಮಗಳನ್ನು ಆರಂಭಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳುವುದರೊಂದಿಗೆ ಸ್ಥಳಿಯ ಅರ್ಹ ಯುವ ಜನಾಂಗಕ್ಕೆ ಉದ್ಯೋಗ ದೊರೆಕಿಸಿಕೊಡಲು ಕಾರಣರಾಗಬೇಕೆಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

1 hour ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

1 hour ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

1 hour ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

2 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

3 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

4 hours ago