ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗು ಬೀದರ್ ಜಿಲ್ಲೆಯ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಜೈವಿಕ ತಂತ್ರಜ್ಞಾನ, ಕೃಷಿ, ಪಶುಸಂಗೋಪನೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್, ಎವಿಜಿಸಿ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ನವೋದ್ಯಮಿಗಳು ಆರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವುಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದೂ ಸಚಿವರು ಹೇಳಿದ್ದಾರೆ.
ಸಹಾಯಧನಕ್ಕೆ ಆಯ್ಕೆಗೊಂಡಿರುವ 19 ನವೋದ್ಯಮಿಗಳನ್ನು ಅಭಿನಂದಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಇನ್ನೂ ಹೆಚ್ಚು ಯುವಕ ಯುವತಿಯರು ನವೋದ್ಯಮಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಕಾರಣರಾಗಬೇಕೆಂದು ಕರೆಕೊಟ್ಟಿದ್ದಾರೆ.
ರಾಜ್ಯದ ರಾಜಧಾನಿಯಾದ ಬೆಂಗಳೂರು ಹಾಗೂ ದಕ್ಷಿಣ ಭಾಗದಲ್ಲಿ ಮಾತ್ರ ನವೋದ್ಯಮಗಳನ್ನು ಆರಂಭಿಸುತ್ತಿದ್ದ ಪರಂಪರೆಯನ್ನು ಬದಲಿಸಿ ಕಲ್ಯಾಣ ಕರ್ನಾಟಕ ಭಾಗದ ಯುವ ಜನತೆಗೂ ಅವಕಾಶ ನೀಡಿರುವುದಾಗಿ ತಿಳಿಸಿರುವ ಸಚಿವರು ಈ ಭಾಗದಲ್ಲಿ ನವೋದ್ಯಮಗಳನ್ನು ಆರಂಭಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳುವುದರೊಂದಿಗೆ ಸ್ಥಳಿಯ ಅರ್ಹ ಯುವ ಜನಾಂಗಕ್ಕೆ ಉದ್ಯೋಗ ದೊರೆಕಿಸಿಕೊಡಲು ಕಾರಣರಾಗಬೇಕೆಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…