ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ 4 ದಿನಗಳ ಕಾಲ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಇಂದು ಫೆ.24 ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.27 ರಿಂದ ಮಾ.2 ರವರೆಗೆ 4 ದಿನಗಳ ಕಾಲ ಪುಸ್ತಕ ಮೇಳ ನಡೆಯಲಿದೆ. ಜೊತೆಗೆ ಸಂಜೆಯ ವೇಳೆ ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯುತ್ತವೆ ಎಂದು ತಿಳಿಸಿದರು.
ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ. ಸರ್ಕಾರದ ಎಲ್ಲ ಭಾಷಾ ಆಕಾಡೆಮಿಗಳಿಗೆ ಒಂದೊಂದು ಪುಸ್ತಕ ಸ್ಟಾಲ್ ಮೀಸಲು ಕೊಡುತ್ತೇವೆ ಎಂದರು.
ಸುಮಾರು 15 ವಿಷಯಗಳಲ್ಲಿ ಸಂವಾದ ಕಾರ್ಯಕ್ರಮ ಇರಲಿದ್ದು, ನಿತ್ಯ 4 ವಿಷಯಗಳ ಮೇಲೆ ಸಂವಾದಗಳು ನಡೆಯಲಿವೆ. ಸಂವಿಧಾನ, ಕ್ರೀಡೆ, ಕನ್ನಡ, ಸಾಹಿತ್ಯ, ಮಕ್ಕಳ ಸಾಹಿತ್ಯ, ಚಲನಚಿತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ವಿವಿಧ ಶಾಲೆಗಳಿಂದ ಬರುವ ಮಕ್ಕಳಿಗೆ ಅಸೆಂಬ್ಲಿ ನೋಡಲು ಅವಕಾಶವಿರುತ್ತದೆ. ಆಯ್ಕೆ ಸಮಿತಿಯ ಆಯ್ಕೆ ಮಾಡಿದ 5 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಸಾರ್ವಜನಿಕರಿಗೆ ಮಾ.2ರವರೆಗೆ ಮುಕ್ತ ಅವಕಾಶವಿದ್ದು, ಮಾ.3 ರಂದು ಶಾಸಕರಿಗೆ ಪುಸ್ತಕ ಮೇಳ ಇರಲಿದೆ. ಪುಸ್ತಕಮೇಳಕ್ಕೆ ರಾಜ್ಯಪಾಲರಿಗೂ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…