ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ 4 ದಿನಗಳ ಕಾಲ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಇಂದು ಫೆ.24 ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.27 ರಿಂದ ಮಾ.2 ರವರೆಗೆ 4 ದಿನಗಳ ಕಾಲ ಪುಸ್ತಕ ಮೇಳ ನಡೆಯಲಿದೆ. ಜೊತೆಗೆ ಸಂಜೆಯ ವೇಳೆ ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯುತ್ತವೆ ಎಂದು ತಿಳಿಸಿದರು.
ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ. ಸರ್ಕಾರದ ಎಲ್ಲ ಭಾಷಾ ಆಕಾಡೆಮಿಗಳಿಗೆ ಒಂದೊಂದು ಪುಸ್ತಕ ಸ್ಟಾಲ್ ಮೀಸಲು ಕೊಡುತ್ತೇವೆ ಎಂದರು.
ಸುಮಾರು 15 ವಿಷಯಗಳಲ್ಲಿ ಸಂವಾದ ಕಾರ್ಯಕ್ರಮ ಇರಲಿದ್ದು, ನಿತ್ಯ 4 ವಿಷಯಗಳ ಮೇಲೆ ಸಂವಾದಗಳು ನಡೆಯಲಿವೆ. ಸಂವಿಧಾನ, ಕ್ರೀಡೆ, ಕನ್ನಡ, ಸಾಹಿತ್ಯ, ಮಕ್ಕಳ ಸಾಹಿತ್ಯ, ಚಲನಚಿತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ವಿವಿಧ ಶಾಲೆಗಳಿಂದ ಬರುವ ಮಕ್ಕಳಿಗೆ ಅಸೆಂಬ್ಲಿ ನೋಡಲು ಅವಕಾಶವಿರುತ್ತದೆ. ಆಯ್ಕೆ ಸಮಿತಿಯ ಆಯ್ಕೆ ಮಾಡಿದ 5 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಸಾರ್ವಜನಿಕರಿಗೆ ಮಾ.2ರವರೆಗೆ ಮುಕ್ತ ಅವಕಾಶವಿದ್ದು, ಮಾ.3 ರಂದು ಶಾಸಕರಿಗೆ ಪುಸ್ತಕ ಮೇಳ ಇರಲಿದೆ. ಪುಸ್ತಕಮೇಳಕ್ಕೆ ರಾಜ್ಯಪಾಲರಿಗೂ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…