ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ 4 ದಿನಗಳ ಕಾಲ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಇಂದು ಫೆ.24 ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.27 ರಿಂದ ಮಾ.2 ರವರೆಗೆ 4 ದಿನಗಳ ಕಾಲ ಪುಸ್ತಕ ಮೇಳ ನಡೆಯಲಿದೆ. ಜೊತೆಗೆ ಸಂಜೆಯ ವೇಳೆ ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯುತ್ತವೆ ಎಂದು ತಿಳಿಸಿದರು.
ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ. ಸರ್ಕಾರದ ಎಲ್ಲ ಭಾಷಾ ಆಕಾಡೆಮಿಗಳಿಗೆ ಒಂದೊಂದು ಪುಸ್ತಕ ಸ್ಟಾಲ್ ಮೀಸಲು ಕೊಡುತ್ತೇವೆ ಎಂದರು.
ಸುಮಾರು 15 ವಿಷಯಗಳಲ್ಲಿ ಸಂವಾದ ಕಾರ್ಯಕ್ರಮ ಇರಲಿದ್ದು, ನಿತ್ಯ 4 ವಿಷಯಗಳ ಮೇಲೆ ಸಂವಾದಗಳು ನಡೆಯಲಿವೆ. ಸಂವಿಧಾನ, ಕ್ರೀಡೆ, ಕನ್ನಡ, ಸಾಹಿತ್ಯ, ಮಕ್ಕಳ ಸಾಹಿತ್ಯ, ಚಲನಚಿತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ವಿವಿಧ ಶಾಲೆಗಳಿಂದ ಬರುವ ಮಕ್ಕಳಿಗೆ ಅಸೆಂಬ್ಲಿ ನೋಡಲು ಅವಕಾಶವಿರುತ್ತದೆ. ಆಯ್ಕೆ ಸಮಿತಿಯ ಆಯ್ಕೆ ಮಾಡಿದ 5 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಸಾರ್ವಜನಿಕರಿಗೆ ಮಾ.2ರವರೆಗೆ ಮುಕ್ತ ಅವಕಾಶವಿದ್ದು, ಮಾ.3 ರಂದು ಶಾಸಕರಿಗೆ ಪುಸ್ತಕ ಮೇಳ ಇರಲಿದೆ. ಪುಸ್ತಕಮೇಳಕ್ಕೆ ರಾಜ್ಯಪಾಲರಿಗೂ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…