ರಾಜ್ಯ

ಸಕ್ರೆಬೈಲು ಶಿಬಿರದಲ್ಲಿ 4 ಆನೆಗಳಿಗೆ ಗಾಯ: ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು.!

ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಎಂಬ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯದಿಂದ ಸೋಂಕು ಆಗಿ ನರಳುತ್ತಿದೆ. ಜೊತೆಗೆ ಶಿಬಿರದಲ್ಲಿರುವ ಮತ್ತೊಂದು ಆನೆ ಸಾಗರ್ ಸೇರಿದಂತೆ 4 ಆನೆಗಳಿಗೆ ಗಾಯದಿಂದ ಬಳಲುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು

ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ವರದಿಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಗಣಿಸಿದೆ. ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯದಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

5 mins ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

35 mins ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

47 mins ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

52 mins ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

6 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

6 hours ago