ರಾಜ್ಯ

ಸಕ್ರೆಬೈಲು ಶಿಬಿರದಲ್ಲಿ 4 ಆನೆಗಳಿಗೆ ಗಾಯ: ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು.!

ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಎಂಬ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯದಿಂದ ಸೋಂಕು ಆಗಿ ನರಳುತ್ತಿದೆ. ಜೊತೆಗೆ ಶಿಬಿರದಲ್ಲಿರುವ ಮತ್ತೊಂದು ಆನೆ ಸಾಗರ್ ಸೇರಿದಂತೆ 4 ಆನೆಗಳಿಗೆ ಗಾಯದಿಂದ ಬಳಲುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು

ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ವರದಿಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಗಣಿಸಿದೆ. ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯದಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago