ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್ವೈ ಅಧಿಕಾರಾವಧಿಯಲ್ಲಿ ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು.
ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆನೆಂದು ತಿಳಿಸಿದರು.
ಈ ಬಗ್ಗೆ ನನಗೆ ನೋಟೀಸ್ ಕೊಡುವುದಾದರೇ ಕೊಡಲಿ, ನನ್ನನ್ನು ಪಕ್ಷದಿಂದ ಹೊರ ಹಾಕಲಿ, ಸತ್ಯ ಹೇಳಿದರೆ ಇವರಿಗೆಲ್ಲಾ ಭಯವಿದ್ದು, ಇವರನ್ನು ಭಯದಲ್ಲಿ ಇಡಬೇಕು. ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ನರೇಂದ್ರ ಮೋದಿ ಅವರಿಂದ ದೇಶ ಉಳಿದಿದೆ. ಈ ಹಿಂದೆಯೂ ದೇಶದಲ್ಲಿ ಹಲವಾರು ಹಗರಣಗಳು ನಡೆದಿದೆ. ಕಲ್ಲಿದ್ದಲು ಹಗರಣ, ೨ಜಿ ಹಗರಣಗಳು ನಡೆದಿವೆ. ಆದರೆ ಪ್ರಧಾನಿ ಮೋದಿ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಅವರಲ್ಲಿ ಒಬ್ಬರಿಗಾದರೂ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ಇದೆಯಾ?. ನಾವು ಮೋದಿಯವರಿಗಾಗಿ ಕೆಲಸ ಮಾಡುತ್ತೇವೆ ಬಿಎಸ್ ಯಡಿಯೂರಪ್ಪ ಅವರಿಗಾಗಿ ಅಲ್ಲ ಎಂದು ಕಿಡಿಕಾರಿದರು.
ಮುರುಗೇಶ್ ನಿರಾಣಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ, ಅವರೆಲ್ಲಾ ಹೇಗೆ ಉಪಾಧ್ಯಕ್ಷ ಆಗುತ್ತಾರೆ. ಇನ್ನು ಬಹಳಷ್ಟು ವಿಷಯಗಳಿದ್ದು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಎಲ್ಲವನ್ನು ಬಹಿರಂಗಗೊಳಿಸುವೇ ಎಂದು ಅಸಮಾಧಾನ ಹೊರಹಾಕಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…