ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್ವೈ ಅಧಿಕಾರಾವಧಿಯಲ್ಲಿ ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು.
ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆನೆಂದು ತಿಳಿಸಿದರು.
ಈ ಬಗ್ಗೆ ನನಗೆ ನೋಟೀಸ್ ಕೊಡುವುದಾದರೇ ಕೊಡಲಿ, ನನ್ನನ್ನು ಪಕ್ಷದಿಂದ ಹೊರ ಹಾಕಲಿ, ಸತ್ಯ ಹೇಳಿದರೆ ಇವರಿಗೆಲ್ಲಾ ಭಯವಿದ್ದು, ಇವರನ್ನು ಭಯದಲ್ಲಿ ಇಡಬೇಕು. ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ನರೇಂದ್ರ ಮೋದಿ ಅವರಿಂದ ದೇಶ ಉಳಿದಿದೆ. ಈ ಹಿಂದೆಯೂ ದೇಶದಲ್ಲಿ ಹಲವಾರು ಹಗರಣಗಳು ನಡೆದಿದೆ. ಕಲ್ಲಿದ್ದಲು ಹಗರಣ, ೨ಜಿ ಹಗರಣಗಳು ನಡೆದಿವೆ. ಆದರೆ ಪ್ರಧಾನಿ ಮೋದಿ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಅವರಲ್ಲಿ ಒಬ್ಬರಿಗಾದರೂ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ಇದೆಯಾ?. ನಾವು ಮೋದಿಯವರಿಗಾಗಿ ಕೆಲಸ ಮಾಡುತ್ತೇವೆ ಬಿಎಸ್ ಯಡಿಯೂರಪ್ಪ ಅವರಿಗಾಗಿ ಅಲ್ಲ ಎಂದು ಕಿಡಿಕಾರಿದರು.
ಮುರುಗೇಶ್ ನಿರಾಣಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ, ಅವರೆಲ್ಲಾ ಹೇಗೆ ಉಪಾಧ್ಯಕ್ಷ ಆಗುತ್ತಾರೆ. ಇನ್ನು ಬಹಳಷ್ಟು ವಿಷಯಗಳಿದ್ದು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಎಲ್ಲವನ್ನು ಬಹಿರಂಗಗೊಳಿಸುವೇ ಎಂದು ಅಸಮಾಧಾನ ಹೊರಹಾಕಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…