ರಾಜ್ಯ

ಕೋವಿಡ್‌ ವೇಳೆಯಲ್ಲಿ ಬಿಎಸ್‌ವೈ ಸರ್ಕಾರದಿಂದ 40 ಸಾವಿರ ಕೋಟಿ ಹಗರಣ: ಯತ್ನಾಳ್​ ಆರೋಪ

ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್‌ವೈ ಅಧಿಕಾರಾವಧಿಯಲ್ಲಿ ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್​​ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್​​ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು.

ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆನೆಂದು ತಿಳಿಸಿದರು.

ಈ ಬಗ್ಗೆ ನನಗೆ ನೋಟೀಸ್‌ ಕೊಡುವುದಾದರೇ ಕೊಡಲಿ, ನನ್ನನ್ನು ಪಕ್ಷದಿಂದ ಹೊರ ಹಾಕಲಿ, ಸತ್ಯ ಹೇಳಿದರೆ ಇವರಿಗೆಲ್ಲಾ ಭಯವಿದ್ದು, ಇವರನ್ನು ಭಯದಲ್ಲಿ ಇಡಬೇಕು. ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ನರೇಂದ್ರ ಮೋದಿ ಅವರಿಂದ ದೇಶ ಉಳಿದಿದೆ. ಈ ಹಿಂದೆಯೂ ದೇಶದಲ್ಲಿ ಹಲವಾರು ಹಗರಣಗಳು ನಡೆದಿದೆ. ಕಲ್ಲಿದ್ದಲು ಹಗರಣ, ೨ಜಿ ಹಗರಣಗಳು ನಡೆದಿವೆ. ಆದರೆ ಪ್ರಧಾನಿ ಮೋದಿ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಅವರಲ್ಲಿ ಒಬ್ಬರಿಗಾದರೂ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ಇದೆಯಾ?. ನಾವು ಮೋದಿಯವರಿಗಾಗಿ ಕೆಲಸ ಮಾಡುತ್ತೇವೆ ಬಿಎಸ್‌ ಯಡಿಯೂರಪ್ಪ ಅವರಿಗಾಗಿ ಅಲ್ಲ ಎಂದು ಕಿಡಿಕಾರಿದರು.

ಮುರುಗೇಶ್‌ ನಿರಾಣಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ, ಅವರೆಲ್ಲಾ ಹೇಗೆ ಉಪಾಧ್ಯಕ್ಷ ಆಗುತ್ತಾರೆ. ಇನ್ನು ಬಹಳಷ್ಟು ವಿಷಯಗಳಿದ್ದು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಎಲ್ಲವನ್ನು ಬಹಿರಂಗಗೊಳಿಸುವೇ ಎಂದು ಅಸಮಾಧಾನ ಹೊರಹಾಕಿದರು.

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

40 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

47 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

2 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago