Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

ಕಲಬುರಗಿ ವಿಮಾನ ನಿಲ್ದಾಣಕ್ಕೆ 200, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 427 ಕೋಟಿ; ಶೀಘ್ರದಲ್ಲೇ ತನಿಖೆ ಎಂದ ಮಧು ಬಂಗಾರಪ್ಪ

ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.

“ಸಂಸದ ಬಿ.ವೈ.ರಾಘವೇಂದ್ರ ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಯಾವ ಲೋಪಗಳಿವೆ ಎಂಬುದನ್ನು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿತ್ತು. ಸರ್ಕಾರ, ಮುಖ್ಯಮಂತ್ರಿಗೆ ಹೆದರಿ ಸಭೆಯಲ್ಲಿ ಹೇಳಿಲ್ಲ. ಬದಲಾಗಿ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡುವ ಮೂಲಕ ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಖಂಡನೀಯ” ಎಂದೂ ಸಹ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಮಧು ಬಂಗಾರಪ್ಪ ಇದ್ದಾರೆ ಎಂಬುದನ್ನು ಬಿವೈ ರಾಘವೇಂದ್ರ ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಹಿಂದೆ ಯಾವುದೇ ಕಾಮಗಾರಿ ಕುರಿತು ಪರಿಶೀಲನೆ ನಡೆಸದ ಅವರು ಈಗ ಯಾಕೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಪ್ರಶ್ನೆ ಹಾಕಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!