ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.
“ಸಂಸದ ಬಿ.ವೈ.ರಾಘವೇಂದ್ರ ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಯಾವ ಲೋಪಗಳಿವೆ ಎಂಬುದನ್ನು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿತ್ತು. ಸರ್ಕಾರ, ಮುಖ್ಯಮಂತ್ರಿಗೆ ಹೆದರಿ ಸಭೆಯಲ್ಲಿ ಹೇಳಿಲ್ಲ. ಬದಲಾಗಿ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡುವ ಮೂಲಕ ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಖಂಡನೀಯ” ಎಂದೂ ಸಹ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಮಧು ಬಂಗಾರಪ್ಪ ಇದ್ದಾರೆ ಎಂಬುದನ್ನು ಬಿವೈ ರಾಘವೇಂದ್ರ ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಹಿಂದೆ ಯಾವುದೇ ಕಾಮಗಾರಿ ಕುರಿತು ಪರಿಶೀಲನೆ ನಡೆಸದ ಅವರು ಈಗ ಯಾಕೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಪ್ರಶ್ನೆ ಹಾಕಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…