ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅವರಿಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿದ್ದರಾಮಯ್ಯ ಅವರು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದಿವಂಗತ ದೇವರಾಜ ಅರಸು ಅವರ ಪುಣ್ಯ ತಿಥಿಯಂದು ಸರ್ಕಾರವು ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿದೆ ಎಂದರು.
ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟಿದ್ದ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದರು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…