ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ಇನ್ನು ಇಂದು ಮಂಡ್ಯದಲ್ಲಿ ಹಾಗೂ ರಾಮನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್ 19 ) ಒಟ್ಟು 44 ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 44 ಹೊಸ ಪ್ರಕರಣಗಳು ವರದಿಯಾಗಿದ್ದರೆ, 35 ಜನ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 79 ಇದ್ದು, ಕೊನೆಯ 24 ಗಂಟೆಗಳಲ್ಲಿ 722 ಟೆಸ್ಟ್ಗಳು ನಡೆದಿವೆ, 487 ಆರ್ಟಿಪಿಸಿಆರ್ ಟೆಸ್ಟ್ಗಳು ನಡೆದಿವೆ ಹಾಗೂ 235 ರ್ಯಾಟ್ ಟೆಸ್ಟ್ಗಳು ನಡೆದಿವೆ.
ಒಟ್ಟು 79 ಸಕ್ರಿಯ ಪ್ರಕರಣಗಳ ಪೈಕಿ 62 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 17 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್ನಲ್ಲಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…