ರಾಜ್ಯ

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಇನಾಮ್ ರದ್ದು ಕಾಯಿದೆ ಅಡಿ ಹಾಸನದ ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎನ್ನಲಾದ 482 ಎಕರೆ ಕಾಯ್ದಿಟ್ಟ ಅರಣ್ಯಭೂಮಿ ಸೇರಿದಂತೆ ಒಟ್ಟು 532 ಎಕರೆ ಜಮೀನಿನ ದಾಖಲೆಗಳನ್ನು 3 ತಿಂಗಳೊಳಗೆ ತಮ್ಮ ಹೆಸರಿಗೆ ಮಾಡಿಕೊಡುವಂತೆ ಆದೇಶ ಪಡೆದಿದ್ದಾರೆ.

90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರ್ಕಾರದ ಹೆಚ್ಚುವರಿ ಸರ್ಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರ್ಕಾರಕ್ಕಾಗಲೀ, ಅರಣ್ಯ ಇಲಾಖೆಗಾಗಲೀ ನೀಡಿರುವುದಿಲ್ಲ ಬದಲಾಗಿ ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿಕೊಡುವಂತೆ ವರ್ತಿಸಿದ್ದು, ಇದು ಶಂಕಾಸ್ಪದವಾಗಿದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಸುಮಾರು 25 ಸಾವಿರ ಕೋಟಿ ರೂ. ಬೆಲೆ ಬಾಳುವ ಈ ಭೂಮಿಯ ಬಗ್ಗೆ ಕೊನೆ ಕ್ಷಣದಲ್ಲಿ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ತಾವು ಸಭೆ ನಡೆಸಿ ಮೇಲ್ಮನವಿ ಸಲ್ಲಿಸಲು ಸೂಚಿಸಿರುವುದಾಗಿ ತಿಳಿಸಿರುವ ಈಶ್ವರ ಖಂಡ್ರೆ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಮೇಲೆ ಹೇಳಲಾದ ವ್ಯಕ್ತಿ ಮನ್ಮಥ ಅಲಿಯಾಸ್ ನೇಮಣ್ಣ ಗೌಡ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ದಬ್ಜೀತ್ ಕುಮಾರ್ ಸದರಿ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ 25.09.2024ರ ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ. ಬೆಂಗಳೂರು ಬಿ.ಎಂ. ಕಾವಲ್ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಲು ಸೂಚಿಸಿದ್ದು, 28.11.2025ರಂದು ದೂರು ಸ್ವೀಕರಿಸಿರುವ ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರು ಈವರೆಗೆ ಎಫ್.ಐ.ಆರ್. ದಾಖಲಿಸದೇ ಇರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಹೆಚ್ಚುವರಿ ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಈ ಬಗ್ಗೆ ಒಂದು ವಿಶೇಷ ತಂಡ ರಚಿಸಿ ಅಥವಾ ಸಿಐಡಿಗೆ ವಹಿಸಿ ಸಮಗ್ರ ತನಿಖೆ ಮಾಡಿಸಲು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಎಸಿಎಫ್ ವಿರುದ್ಧ ಕ್ರಮಕ್ಕೂ ಸೂಚನೆ: ಈ ಮಧ್ಯೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ಸೂಚಿಸಿದ್ದರೂ, ದೂರು ದಾಖಲಿಸಲು ವಿಳಂಬ ಮಾಡಿರುವ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

14 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

14 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

15 hours ago