ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿ ಉದ್ಯಾನ ಮಾಡುವ ಈಶ್ವರ ಖಂಡ್ರೆ ಆಶಯಕ್ಕೆ ಬಲ
ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ.
ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.
1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.
ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.
ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.
ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…