ರಾಜ್ಯ

ಎಚ್ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ

ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿ ಉದ್ಯಾನ ಮಾಡುವ ಈಶ್ವರ ಖಂಡ್ರೆ ಆಶಯಕ್ಕೆ ಬಲ

ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ.

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.

ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

1 hour ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

2 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

3 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

4 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

4 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

4 hours ago