ರಾಜ್ಯ

ಎಚ್ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ

ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿ ಉದ್ಯಾನ ಮಾಡುವ ಈಶ್ವರ ಖಂಡ್ರೆ ಆಶಯಕ್ಕೆ ಬಲ

ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ.

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.

ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

8 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

8 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

9 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

10 hours ago