ರಾಜ್ಯ

ಜಾತಿಗಣತಿ ವರದಿ ವಿರೋಧಿಸಿ ವೀರಶೈವ ಲಿಂಗಾಯತ ಮಹಾಸಭಾದಿಂದ 5 ನಿರ್ಣಯಗಳು

ಬೆಂಗಳೂರು: ನಗರದಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಂತ್ಯವಾಗಿದೆ.

ಈ ಸಭೆಯಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿಗಣತಿ ವರದಿಯನ್ನು ಒಪ್ಪದಿರಲು ತೀರ್ಮಾನಿಸಿದೆ. ಜಾತಿಗಣತಿ ಅವೈಜ್ಞಾನಿಕವಾಗಿ ನಡೆದಿದೆ ಎಂದು ಪ್ರತಿಪಾದಿಸಿ ಮತ್ತೊಮ್ಮೆ ವೈಜ್ಞಾನಿಕ ಗಣತಿ ನಡೆಸಬೇಕೆಂದು ಒತ್ತಾಯಿಸಲು ತೀರ್ಮಾನ ಮಾಡಲಾಗಿದೆ.

ಸಭೆಯ 5 ಪ್ರಮುಖ ನಿರ್ಣಯಗಳು

1. ಅಖಿಲ ಭಾರತ ವೀರಶೈವ/ಲಿಂಗಾಯತ ಮಹಾಸಭೆಯು ಬಸವಾದಿ ತತ್ವಗಳನ್ನು ಪ್ರತಿಪಾದಿಸುತ್ತಿದ್ದು, ಸರ್ವರಿಗೂ ಲೇಸನ್ನೆ ಬಯಸುವ ಸಮಸಮಾಜವನ್ನು ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆ ನಡೆಯುತ್ತಿರುವ ಸಂಸ್ಥೆಯಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಯ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭೆ ಆಗ್ರಹಿಸುತ್ತದೆ.

2. ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು, ಶ್ರೀ ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾದುದ್ದರಿಂದ ಸ್ವೀಕಾರಕ್ಕೆ ಅರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಆಗ್ರಹಿಸುತ್ತದೆ.

3.ರಾಜ್ಯ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ “ಲಿಂಗಾಯತ” ಪದವಿಲ್ಲದೇ ಕೇವಲ ಉಪಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಛ ಹಾಗೂ ಸರ್ವೋಚ್ಛ ನ್ಯಾಯಾಲಯ ಸಿವಿಲ್ ಅಪೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು, ಎಲ್ಲಾ ಲಿಂಗಾಯತ ಉಪಪಂಗಡಗಳ ಜೊತೆಯಲ್ಲಿ “ಲಿಂಗಾಯತ” ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ, ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಮಹಾಸಭಾ ಮನವಿ ಮಾಡುತ್ತದೆ.

4. ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮಾನ್ಯ ಮುಖ್ಯಮಂತ್ರಿಗಳು ಶಿಫಾರಸ್ಸು ಮಾಡಬೇಕೆಂದು ಮಹಾಸಭೆಯು ಮನವಿ ಮಾಡುತ್ತದೆ.

5. ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ.

 

 

 

andolana

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

3 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

3 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

3 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

4 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

4 hours ago