ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಆ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿ ಸಹಿ ಸಂಗ್ರಹ ನಡೆಯುತ್ತದೆ. ನನ್ನ ಸಹಮತವೂ ಇದಕ್ಕೆ ಇದೆ. 31 ಜನ ಆಕಾಂಕ್ಷಿಗಳು ಇದ್ದೇವೆ. ನನಗೆ ಕೊಡಿ ಎಂದು ಕೇಳಿಲ್ಲ. ಯಾರಿಗಾದರೂ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
ನಮ್ಮಲ್ಲಿ ಒಗ್ಗಟ್ಟು ಇದೆ. ನಮ್ಮಲ್ಲಿ 5 ಜನರಿಗೆ ಕೊಡಿ. ರವಿ ಗಣಿಗ, ಪೊನ್ನಣ್ಣ, ಶಿವಗಂಗಾ, ನಯಮ ಮೋಟಮ್ಮ, ಮಂಥರ್ ಗೌಡನಾದ್ರೂ ಅವರಿಗಾದರೂ ಕೊಡಿ ಎಂದು ಹೇಳಿದರು.





