ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇಂದು ಬೆಂಗಳೂರಿನ ಜಾ.ದಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನನ್ನ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಪ್ರೇರಿತವಾಗಿದೆ. ಅಲ್ಲದೆ, ಈಗಿನ ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ 2011ರಲ್ಲಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಏನು ಮಾತನಾಡಿದ್ದಾರೆ ಎಂದು ತರಿಸಿಕೊಂಡು ನೋಡಲಿ ಎಂದು ಸವಾಲು ಹಾಕಿದರು.
ರಾಜ್ಯಪಾಲರು ಸರ್ಕಾರದ ಮಾಹಿತಿ ಕೋರಿ ಪತ್ರ ಬರೆಯುತ್ತಾರೆ. ಆದರೆ ಕ್ಯಾಬಿನೆಟ್ ಅನುಮತಿ ಇಲ್ಲದೆ ಉತ್ತರ ಕೊಡಬಾರದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸುತ್ತಾರೆ. ಸರ್ಕಾರದ ಅಕ್ರಮ, ಅಧಿಕಾರ ದುರುಪಯೋಗ ಹೊರಗಡೆ ಎಂಬುದಕ್ಕೆ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನನ್ನ ವಿರುದ್ಧ ರಾಜಕೀಯ ಆರೋಪ ಇದೇ ಪ್ರಥಮ ಬಾರಿಗೆ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ. ಆದರೆ ಅವರ ವಿರುದ್ಧ ಇನ್ನೂ 50 ಪ್ರಕರಣಗಳು ಬಾಕಿ ಇವೆ. ದೇಶದಲ್ಲಿ ಸರ್ಕಾರದ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡುವುದು, ಒತ್ತಡ ತರುವುದು ಇದೇ ಹೊಸದೆನಲ್ಲಾ ಎಂದು ಕಿಡಿಕಾರಿದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…