Results Evaluate Progress Outcome Productivity Concept
ಬೆಂಗಳೂರು: 545 ಪೊಲೀಸ್ ಸಬ್ಇನ್ಸ್ಪೆಕ್ಟರ್(ಪಿಎಸ್ಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಪ್ರಕಟಗೊಂಡಿದೆ.
ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳಲ್ಲಿ ಸಂತಸ ಮೂಡಿಸಿದೆ.
ಮೊದಲಿಗೆ ಪೊಲೀಸ್ ನೇಮಕಾತಿ ಮಂಡಳಿ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಬಗ್ಗೆ ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಮರು ಪರೀಕ್ಷೆ ನಡೆಸಿತ್ತು. ಬಳಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ಸಲ್ಲಿಸಿತ್ತು. ಆದರೆ, ಹೈದರಾಬಾದ್-ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಗೊಂದಲ ಉಂಟಾದ ಕಾರಣ ಆಯ್ಕೆ ಪಟ್ಟಿ ಪ್ರಕಟವಾಗಿರಲಿಲ್ಲ.
ಅಭ್ಯರ್ಥಿಗಳಿಗೆ ಮೀಸಲಾತಿ ಅನುಗುಣವಾಗಿ 2023ರ ಫೆ.1ರಂದು ಹೊರಡಿಸಿದ್ದ ಸುತ್ತೋಲೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆ ಸಿದ್ಧಪಡಿಸಿದೆ. ಅಲ್ಲದೆ, 2020ರ ಜೂನ್ 6 ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಈ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಲ್ಲದೆ, ಈ ಆಯ್ಕೆ ಪಟ್ಟಿಯು ಹೈಕೋರ್ಟ್ನ ವಿಚಾರಣಾ ಹಂತದಲ್ಲಿರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿದೆ ಎಂದು ಗೃಹ ಇಲಾಖೆ ಹೇಳಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…