BJP-JDS alliance
ಬೆಂಗಳೂರು: ಜೆಡಿಎಸ್ನ ವರಿಷ್ಠ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು 55 ಮಂದಿ ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.
ಬಿಜೆಪಿ ಮತ್ತು ಜೆಡಿಎಸ್ ಪರವಾಗಿ ಕೆಲ ಏಜೆಂಟರು ಕಾಂಗ್ರೆಸ್ನ 55 ಮಂದಿ ಶಾಸಕರುಗಳ ಹೆಸರನ್ನು ಪಟ್ಟಿ ಮಾಡಿಕೊಂಡು ಮಾತುಕತೆ ನಡೆಸುತ್ತಿರುವುದು ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಪಕ್ಷ 140 ಶಾಸಕರ ಸಂಖ್ಯಾಬಲ ಹೊಂದಿದೆ. ಯಾರು ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಸಾಧ್ಯವಿಲ್ಲ ಎಂಬ ಮೊಂಡು ಧೈರ್ಯದಲ್ಲಿ ಕೈ ನಾಯಕರಿದ್ದಾರೆ. ಹೀಗಾಗಿಯೇ ಪಕ್ಷದಲ್ಲಿನ ಒಳ ಜಗಳಗಳೇ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಆಪರೇಷನ್ ಕಮಲದ ಬಗ್ಗೆ ಅಸಡ್ಡೆತನ ಕಂಡು ಬರುತ್ತದೆ.
ಈ ನಡುವೆ ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಚಾಲನೆ ನೀಡಿರುವುದು ಚರ್ಚೆಯಾಗುತ್ತಿದೆ. ಈ ಭಾರಿ ಬಿಜೆಪಿ, ಜೆಡಿಎಸ್ನ ಯಾವ ನಾಯಕರು ಅಧಿಕೃತವಾಗಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳದೆ ಏಜೆಂಟರುಗಳನ್ನು ಮುಂದೆ ಬಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…