ರಾಜ್ಯ

55 ಕೈ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷದಿಂದ ಗಾಳ: ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಜೆಡಿಎಸ್‌‍ನ ವರಿಷ್ಠ ನಾಯಕ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಜೆಡಿಎಸ್‌‍ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು 55 ಮಂದಿ ಕಾಂಗ್ರೆಸ್‌‍ ಶಾಸಕರಿಗೆ ಗಾಳ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.

ಬಿಜೆಪಿ ಮತ್ತು ಜೆಡಿಎಸ್‌‍ ಪರವಾಗಿ ಕೆಲ ಏಜೆಂಟರು ಕಾಂಗ್ರೆಸ್‌‍ನ 55 ಮಂದಿ ಶಾಸಕರುಗಳ ಹೆಸರನ್ನು ಪಟ್ಟಿ ಮಾಡಿಕೊಂಡು ಮಾತುಕತೆ ನಡೆಸುತ್ತಿರುವುದು ಸಂಚಲನ ಮೂಡಿಸಿದೆ.

ಕಾಂಗ್ರೆಸ್‌‍ ಪಕ್ಷ 140 ಶಾಸಕರ ಸಂಖ್ಯಾಬಲ ಹೊಂದಿದೆ. ಯಾರು ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಸಾಧ್ಯವಿಲ್ಲ ಎಂಬ ಮೊಂಡು ಧೈರ್ಯದಲ್ಲಿ ಕೈ ನಾಯಕರಿದ್ದಾರೆ. ಹೀಗಾಗಿಯೇ ಪಕ್ಷದಲ್ಲಿನ ಒಳ ಜಗಳಗಳೇ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಆಪರೇಷನ್‌ ಕಮಲದ ಬಗ್ಗೆ ಅಸಡ್ಡೆತನ ಕಂಡು ಬರುತ್ತದೆ.

ಈ ನಡುವೆ ಸದ್ದಿಲ್ಲದೆ ಆಪರೇಷನ್‌ ಕಮಲಕ್ಕೆ ಚಾಲನೆ ನೀಡಿರುವುದು ಚರ್ಚೆಯಾಗುತ್ತಿದೆ. ಈ ಭಾರಿ ಬಿಜೆಪಿ, ಜೆಡಿಎಸ್‌‍ನ ಯಾವ ನಾಯಕರು ಅಧಿಕೃತವಾಗಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳದೆ ಏಜೆಂಟರುಗಳನ್ನು ಮುಂದೆ ಬಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

1 second ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

13 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

14 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

14 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

15 hours ago